ಶಿವಮೊಗ್ಗ, ಏಪ್ರಿಲ್ 15, : ಏಪ್ರಿಲ್ 17  ರಂದು ಶ್ರೀ ರಾಮ ನವಮಿ ಹಬ್ಬ ಹಾಗೂ ಏಪ್ರಿಲ್ 21 ರಂದು ಮಹಾವೀರ ಜಯಂತಿ ಇರುವ ಪ್ರಯುಕ್ತ ಈ ದಿನಾಂಕಗಳಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. 

error: Content is protected !!