ನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರÀ ಮತ್ತು ಯೆಲ್ಲಾಪುರ ತಾಲೂಕಿನ ಗೇರಕೊಂಬೆಯವರಾದ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದು ಇವರು ಉತ್ತಮ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಗಾಗಿ “ “ಶ್ರೇಷ್ಟ ಶಿಕ್ಷಕ” ಪ್ರಶಸ್ತಿ ನೀಡಿ ವಿಶ್ವವಿದ್ಯಾಲಯದ 19 ನೇ ಸಂಸ್ಥಾಪನೆಯ ದಿನದಂದು ಸನ್ಮಾನಿಸಿದೆ.

ಇದೇ ಸಂದರ್ಭದಲ್ಲಿ ಶ್ರೀ ಎಸ್ ವಿ ಪ್ರಭಾಕರ್, ಪಶುವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಇವರಿಗೆ “ಶ್ರೇಷ್ಠ ಶಿಕ್ಷಕೇತರ ಸಿಬ್ಬಂದಿ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ವಿಶ್ವವಿದ್ಯಾಲಯದಲ್ಲಿ ಸುಧೀರ್ಘ 24 ವರ್ಷಗಳ ಸೇವೆಯನ್ನು ಇವರು ವಿವಿಧ ಸ್ಥರಗಳಲ್ಲಿ ಸಲ್ಲಿಸಿದ್ದು ಮೇಲಾಧಿಕಾರಿಗಳು ನೀಡುವ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಅಚ್ಚುಮೆಚ್ಚಾಗಿದ್ದಾರೆ.

ಡಾ: ಶ್ರೀಧರ್ ಇವರು ಪಶುವೈದ್ಯಕೀಯ ರಂಗದಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ಔಷಧಶಾಸ್ತç ಮತ್ತು ವಿಷಶಾಸ್ತç ವಿಷಯವನ್ನು ಬೋಧನೆ ಮಾಡಿರುವುದನ್ನು, 200 ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವುದನ್ನು, ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ್ರ ವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು ಮತ್ತು ರೈತರ ಮಾಹಿತಿಗಾಗಿ ಅನೇಕ ತಾಂತ್ರಿಕ ಮಾಹಿತಿಗಳನ್ನು ವಿವಿಧ ಮಾಧ್ಯಮಗಳ ಮೂಲಕ ನೀಡುತ್ತಿರುವುದನ್ನು, ಬಂಜೆತನದಿAದ ಬಳಲುತ್ತಿರುವ ಎಷ್ಟೋ ರಾಸುಗಳಿಗೆ ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.

 
                                                                                                                       
 
 
 
   
error: Content is protected !!