ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನವಿದ್ದು ಎಪ್ರೀಲ್ 26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳಲಿದೆ ಕಡ್ಡಾಯವಾಗಿ ಮತದಾನ ಮಾಡಲು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಸಕ್ರೈಬೆಲು ಆನೆ ಬಿಡಾರದಲ್ಲಿ ಆಗಮಿಸಿದ ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.

ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ ಗಾಜನೂರು ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಭಾಗವಹಿಸಿದ ಮತದಾರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಸಿ ಎಸ್ ಗಾಯತ್ರಿ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಮತದಾನ ನಮ್ಮ ನಿಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಹಕ್ಕನ್ನು ತಪ್ಪದೆ ಚಲಾಯಿಸಿ ಜವಾಬ್ದಾರಿಯುತ ಪ್ರಜೆಯಾಗೋಣ ಎಂದು
ಜಿಲ್ಲಾ ಸ್ವೀಪ್ ರಾಯಭಾರಿಗಳಾದ ಡಾ ಕೆ ಎಸ್ ಶುಭ್ರತಾರವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ SLMT ನವೀದ್ ಅಹಮದ್ ಪವ್ರಿಜ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!