ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.
ಅವರು ಭಾನುವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾಂಗ್ರೆಸ ಮಹಿಳಾ ಸಮಾವೇಶವನ್ನುದ್ಧೇಶಿಸಿ ಮಾತನಾಡುತ್ತಿದ್ದರು,
ರಾಜ್ಯದಲ್ಲಿ ಕಾಂಗ್ರೆಸ್ 138 ಸ್ಥಾನ ಪಡೆದಿದೆ ಎಂದರೆ ಅದು ಪಕ್ಷದ ಕಾರ್ಯಕರ್ತರು ಮತ್ತು ಮಹಿಳೆಯರಿಂದ. ಮಹಿಳೆಯರು ಮನೆಗೆಲಸದಿಂದ ಹೊರ ಬರುವುದು ಕಷ್ಟ. ಆದರೂ ಪಕ್ಷದ ಸಂಘಟನೆಗೆ ದುಡಿಯುತ್ತಿರುವುದು ಶ್ಲಾಘನೀಯ. ನೀವು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹುರಿದುಂಬಿಸಿದರು.
ಬಿಜೆಪಿ ಕಾಟಾಚಾರಕ್ಕೆ ರಾಜಕೀಯದಲ್ಲಿ ಮೀಸಲಾತಿ ಮಸ್ರದೆಯನ್ನು ಪಾಸು ಮಾಡಿದೆ. ಆದರೆ ವಾಸ್ತವದಲ್ಲಿ ಮಹಿಳೆಯರಿಗೆ ಆದ್ಯತೆ, ಪ್ರಶಸ್ತ್ಯ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ನ ಇತಿಹಾಸವೇ ದೇಶದ ಇತಿಹಾಸ ಎಂದ ಅವರು ಮುಂದಿನ ಪೀಳಿಗೆಗೆ ಒಳ್ಳೆಯದಾಗುವುದಕ್ಕೆ ಗೃಹ ಲಕ್ಷ್ಮೀ, ಶಕ್ತಿ ಯೋಜನೆಗಳಂಥಹ ಯೋಜನೆಗಳನ್ನು ಪ್ರಚುರಪಡಿಸಬೇಕು. ಪಕ್ಷ ಅಧಿಕಾರದಲ್ಲಿದೆ. ಪಕ್ಷದ ಸಂಘಟನೆಗೆ ಹೆಚ್ಚೆಚ್ಚು ಕೆಲಸ ಮಾಡಿ ಎಂದು ಕರೆ ನೀಡಿದರು.
ಬಿಜೆಪಿ ಜಾತಿ, ಮತ, ಧರ್ಮ, ಪಂಥದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕಿವಿ ಮಾತು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಶಕ್ತಿ, ಸ್ವಾತಂತ್ರ್ಯ ನೀಡಲಾಗಿದೆ. ದೇಶದಲ್ಲಿ ಸಮಾನತೆ ಸಾಧಿಸಿದ ಪಕ್ಷ ಎಂದರೆ ಅದು ಕಾಂಗ್ರೆಸ್. ಈಗ ಬಿಜೆಪಿ, ಮೋದಿಯವರು ಯುದ್ಧದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಯುದ್ಧದ ಅರ್ಥ ಹೇಳಿಕೊಟ್ಟಿದ್ದೇ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಎಂದ ಅವರು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮ ಆಹಿತಿ ಕೊರತೆ ಇದೆ. ಅದನ್ನು ಮಹಿಳಾ ಕಾರ್ಯಕರ್ತರು ಹೋಗಲಾಡಿಸಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಎನ್.ರಮೇಶ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎನ್.ರವಿಕುಮಾರ್, ಎಚ್.ಎಸ್.ಯೋಗೀಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅನಿತಾಕುಮಾರಿ, ಪುಷ್ಪಾ ಶಿವಕುಮಾರ್, ಕಲೀಂ ಪಾಶಾ, ಸಿ.ಎಸ್.ಚಂದ್ರಭೂಪಾಲ್, ವಿಜಯಲಕ್ಷ್ಮೀ ಪಾಟೀಲ್, ಯಮುನಾ ರಂಗೇಗೌಡ, ಕಲಗೋಡು ರತ್ನಾಕರ, ಡಾ.ಶ್ರೀನಿವಾಸ್ ಕರಿಯಣ್ಣ, ಎಸ್.ಪಿ.ಶೇಷಾದ್ರಿ ಮೊದಲಾದವರಿದ್ದರು.
